September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!