23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ ನ.೧೩ರಂದು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮತ್ತು ವಾಸ್ತು ತಜ್ಞರಾದ ಪಿ.ಜಿ. ಜಗನ್ನಿವಾಸ ರಾವ್ ಪುತ್ತೂರು ಇವರ ನೇತೃತ್ವದಲ್ಲಿ ದೇವರಗುಡ್ಡೆ ಭಟ್ರಬೈಲು ತೆಕ್ಕಾರುನಲ್ಲಿ ನಡೆಯಿತು.


ಬೆಳಿಗ್ಗೆ ಗೋಪಾಲಕೃಷ್ಣ ದೇವರ ವಿಶೇಷ ಪೂಜೆ, ಪ್ರಾರ್ಥನೆ, ಪುಣ್ಯಾಹ, ಮುಷ್ಟಿ ಆದಿ ಶುದ್ಧಿ, ಆಧಾರ ಶಿಲೆ ಪ್ರತಿಷ್ಠೆ, ನಿಧಿಕುಂಭ, ಪದ್ಮ ಕೂರ್ಮ ಹಾಗೂ ಯೋಗನಾಳ ಪ್ರತಿಷ್ಠಾ ಕ್ರಿಯೆಗಳು, ದಕ್ಷಿಣ ಭಾಗದಲ್ಲಿ ಗಣಪತಿ, ದಕ್ಷಿಣಮೂರ್ತಿ ಸಂಕಲ್ಪ ಪ್ರತಿಷ್ಠೆ, ರಾತ್ರಿ ವಾಸ್ತು ಬಲಿ, ಗರ್ಭಪಾತ್ರೆ ಸಂಸ್ಕಾರ ಹೋಮ, ಕಲಶಪೂರಣ, ಗರ್ಭನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಸಂಸದ ಕಿಶೋರ್ ಕುಮಾರ್ ಪುತ್ತೂರು, ಟ್ರಸ್ಟ್‌ನ ಅಧ್ಯಕ್ಷ ನಾಗಭೂಷಣ್ ರಾವ್, ಸಂಚಾಲಕ ಉದ್ಯಮಿ ಲಕ್ಷ್ಮಣ ಭಟ್ರಬೈಲು, ತಾ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ಬಾರ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು, ಗೋಪಾಲಕೃಷ್ಣ ಸೇವಾ ಟ್ರಸ್ಟಿಗಳು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya
error: Content is protected !!