23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ “ಔಷಧವಾಗಿ ಆಹಾರ” ಕಾರ್ಯಾಗಾರವನ್ನು ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಸಹಯೋಗದಲ್ಲಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ನೈಸರ್ಗಿಕ ಚಿಕಿತ್ಸೆ ಮತ್ತು ಪೌಷ್ಠಿಕತೆಯ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಪೋಷಕರಿಗೆ ತಮ್ಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಉಚಿತವಾಗಿ ಡಯಾಬಿಟಿಕ್ ತಪಾಸಣೆ, ರಕ್ತದೊತ್ತಡ ತಪಾಸಣೆ, ದೇಹತೂಕ ಮೌಲ್ಯಮಾಪನ ಹಾಗೂ ಆಹಾರ ಸಲಹೆ ನೀಡಲಾಯಿತು.

ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಕಾರ್ಯಕ್ರಮ ನಿರೂಪಿಸಿ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ಶಿಕ್ಷಕಿ ಜಿಜಿ ಜೋಸ್ ವಂದಿಸಿದರು.

Related posts

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!