22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ: “ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ” ಎಂದು ಉಜಿರೆ ರತ್ನಮಾನಸದ ಪ್ರಧಾನ ನಿಲಯಪಾಲಕರಾದ ಯತೀಶ್ ಕೆ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ನಿಹಾ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಹೃತಿಕ್ ಪ್ರಸಾದ್ ಹಾಗೂ ಅಭೀಶ್ ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!