September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ: “ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ” ಎಂದು ಉಜಿರೆ ರತ್ನಮಾನಸದ ಪ್ರಧಾನ ನಿಲಯಪಾಲಕರಾದ ಯತೀಶ್ ಕೆ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ನಿಹಾ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಹೃತಿಕ್ ಪ್ರಸಾದ್ ಹಾಗೂ ಅಭೀಶ್ ವಂದಿಸಿದರು.

Related posts

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya
error: Content is protected !!