23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya
error: Content is protected !!