22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!