September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya
error: Content is protected !!