30.3 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya
error: Content is protected !!