23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!