26.9 C
ಪುತ್ತೂರು, ಬೆಳ್ತಂಗಡಿ
April 23, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya
error: Content is protected !!