23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya
error: Content is protected !!