39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya
error: Content is protected !!