July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಆರಂಬೋಡಿ ಯುವ ಬಂಟರ ಸಂಘದಿಂದ ಸಮಾಜಸೇವಕ ಮನೋಜ್ ಶೆಟ್ಟಿ ಐತೇರಿಗೆ ಸನ್ಮಾನ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
error: Content is protected !!