25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya
error: Content is protected !!