22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ ನ.೧೩ರಂದು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮತ್ತು ವಾಸ್ತು ತಜ್ಞರಾದ ಪಿ.ಜಿ. ಜಗನ್ನಿವಾಸ ರಾವ್ ಪುತ್ತೂರು ಇವರ ನೇತೃತ್ವದಲ್ಲಿ ದೇವರಗುಡ್ಡೆ ಭಟ್ರಬೈಲು ತೆಕ್ಕಾರುನಲ್ಲಿ ನಡೆಯಿತು.


ಬೆಳಿಗ್ಗೆ ಗೋಪಾಲಕೃಷ್ಣ ದೇವರ ವಿಶೇಷ ಪೂಜೆ, ಪ್ರಾರ್ಥನೆ, ಪುಣ್ಯಾಹ, ಮುಷ್ಟಿ ಆದಿ ಶುದ್ಧಿ, ಆಧಾರ ಶಿಲೆ ಪ್ರತಿಷ್ಠೆ, ನಿಧಿಕುಂಭ, ಪದ್ಮ ಕೂರ್ಮ ಹಾಗೂ ಯೋಗನಾಳ ಪ್ರತಿಷ್ಠಾ ಕ್ರಿಯೆಗಳು, ದಕ್ಷಿಣ ಭಾಗದಲ್ಲಿ ಗಣಪತಿ, ದಕ್ಷಿಣಮೂರ್ತಿ ಸಂಕಲ್ಪ ಪ್ರತಿಷ್ಠೆ, ರಾತ್ರಿ ವಾಸ್ತು ಬಲಿ, ಗರ್ಭಪಾತ್ರೆ ಸಂಸ್ಕಾರ ಹೋಮ, ಕಲಶಪೂರಣ, ಗರ್ಭನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಸಂಸದ ಕಿಶೋರ್ ಕುಮಾರ್ ಪುತ್ತೂರು, ಟ್ರಸ್ಟ್‌ನ ಅಧ್ಯಕ್ಷ ನಾಗಭೂಷಣ್ ರಾವ್, ಸಂಚಾಲಕ ಉದ್ಯಮಿ ಲಕ್ಷ್ಮಣ ಭಟ್ರಬೈಲು, ತಾ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ಬಾರ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು, ಗೋಪಾಲಕೃಷ್ಣ ಸೇವಾ ಟ್ರಸ್ಟಿಗಳು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya
error: Content is protected !!