25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ “ಔಷಧವಾಗಿ ಆಹಾರ” ಕಾರ್ಯಾಗಾರವನ್ನು ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಸಹಯೋಗದಲ್ಲಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್. ಬಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ನೈಸರ್ಗಿಕ ಚಿಕಿತ್ಸೆ ಮತ್ತು ಪೌಷ್ಠಿಕತೆಯ ವಿಭಾಗದ ಡೀನ್ ಡಾ. ಗೀತಾ ಬಿ. ಶೆಟ್ಟಿ ಪೋಷಕರಿಗೆ ತಮ್ಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಉಚಿತವಾಗಿ ಡಯಾಬಿಟಿಕ್ ತಪಾಸಣೆ, ರಕ್ತದೊತ್ತಡ ತಪಾಸಣೆ, ದೇಹತೂಕ ಮೌಲ್ಯಮಾಪನ ಹಾಗೂ ಆಹಾರ ಸಲಹೆ ನೀಡಲಾಯಿತು.

ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಕಾರ್ಯಕ್ರಮ ನಿರೂಪಿಸಿ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ಶಿಕ್ಷಕಿ ಜಿಜಿ ಜೋಸ್ ವಂದಿಸಿದರು.

Related posts

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!