39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!