25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya
error: Content is protected !!