September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಂಥಾಲಯ ಕಚೇರಿಯಲ್ಲಿ ನಡೆಯಿತು.

ವಿದ್ಯಾರ್ಥಿಗಳನ್ನು ಗ್ರಂಥಾಲಯ ಕೇಂದ್ರಕ್ಕೆ ಸೆಳೆಯುವ, ಪುಸ್ತಕಗಳ ಮೇಲೆ ಅಭಿರುಚಿ ತೋರಲು ಸೂಕ್ತ ಸಲಹೆಗಳನ್ನು ನೀಡಲಾಯಿತು. ಗ್ರಂಥಾಲಯ ಸದ್ರಿ ಕಟ್ಟಡ ಹಳೆಯದಾಗಿದ್ದು ನೂತನ ಕಟ್ಟಡ ನಿರ್ಮಾಣದ ಕುರಿತು ಗ್ರಾಮ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಯಿತು. ಗ್ರಾಮ ವ್ಯಾಪ್ತಿಯ ಶಾಲೆಗಳಲ್ಲಿ ಚಟುವಟಿಕೆ, ಮಕ್ಕಳ ಹಬ್ಬ ಆಚರಣೆಯ ಕುರಿತು ಚರ್ಚೆ ನಡೆಯಿತು.

ಸಲಹಾ ಸಮಿತಿ ಸದಸ್ಯರಾದ ಶಾಲಾ ಮುಖ್ಯೋಪಾಧ್ಯಾಯ ಟಿ.ಬಿ.ಬಸವಲಿಂಗಪ್ಪ, ಸ್ಥಳೀಯ ಯುವಕ-ಯುವತಿ ಮಂಡಲ ಪ್ರತಿನಿಧಿಗಳಾದ ಮಿಥುನ್ ಕುಲಾಲ್ ಹಾಗೂ ಮಮತಾ, ಹಿರಿಯ ನಾಗರಿಕ ಕುಶಾಲಪ್ಪ ಗೌಡ, ಶಿಕ್ಷಣ ತಜ್ಞ ಯುವರಾಜ್ ಅನಾರ್, ಪತ್ರಕರ್ತ ಮನೀಶ್ ವಿ.ಅಂಚನ್, ಕೌಶಲಾಭಿವೃದ್ಧಿಯ ಶೋಭಾ, ಗ್ರಂಥಾಲಯ ಮೇಲ್ವಿಚಾರಕಿ ಮೋಹಿನಿ, ವಿದ್ಯಾರ್ಥಿಗಳಾದ ದೀಪಾ, ಅಜೇಯ್, ಜಯಸೂರ್ಯ, ಭವ್ಯಾ, ಸದಸ್ಯ ಕಾರ್ಯರ್ಶಿ ಶ್ರವಣ್ ಕುಮಾರ್, ಗ್ರಾ.ಪಂ.ಕಾರ್ಯದರ್ಶಿ ಆನಂದ ಉಪಸ್ಥಿತರಿದ್ದರು. ಸಿಬ್ಬಂದಿ ಸುಂದರ ನಾಯ್ಕ, ಧರ್ಣಪ್ಪ, ಸೌಮ್ಯಾ, ಸಂಗೀತಾ ಹಾಗೂ ಸೌಮ್ಯಾ ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya
error: Content is protected !!