September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ದಯಾ ವಿಶೇಷ ಶಾಲೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತ ಹಿನ್ನಲೆಯಲ್ಲಿ ಬೆಳ್ತಂಗಡಿಯ ಮುಳಿಯ ಜುವೆಲ್ಲರ್ಸ್ ರವರ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ದಯಾ ವಿಶೇಷ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮುಳಿಯ ಜುವೆಲ್ಲರ್ಸ್ ವತಿಯಿಂದ ಸಿಬ್ಬಂದಿಗಳು ಆಗಮಿಸಿ ಶಾಲೆಯ ನಿರ್ದೇಶಕರಾದ ವಂ.ಫಾ.ವಿನೋದ್ ಮಸ್ಕರೇನಸ್ ರವರನ್ನು ಸನ್ಮಾನಿಸಿ, ಸಮಾಜದಲ್ಲಿ ಕಡೆಗಣಿಸಲ್ಪಟ್ಟ ವಿಕಲಚೇತನ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅವರ ಸರ್ವತೋಮುಖ ಏಳಿಗೆಗಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶಾಲೆಯನ್ನು ಪ್ರಶಂಸಿದರು.

ವಂ.ಫಾ.ವಿನೋದ್ ಮಸ್ಕರೇನಸ್ ರವರು ಮಾತನಾಡಿ ಮುಳಿಯ ಜುವೆಲ್ಲರ್ಸ್ ರವರು ನಮ್ಮ ಶಾಲಾ ವಾರ್ಷಿಕೋತ್ಸವದ ವೇಳೆ ಹಲವು ಬಾರಿ ಮಕ್ಕಳಿಗೆ ಹಾಗೂ ಶಾಲೆಗೆ ತಮ್ಮಿಂದಾದ ಸಹಾಯವನ್ನು ನೀಡಿ ನಮ್ಮ ಈ ಕಾರ್ಯದಲ್ಲಿ ಸಹಕಾರ ಹಾಗೂ ನಮಗೆ ಪ್ರಚೋದನೆ ನೀಡಿರುತ್ತಾರೆ. ಭಗವಂತನು ಅವರ ಎಲ್ಲಾ ಕಾರ್ಯಗಳಲ್ಲಿ ಅವರನ್ನು ಸದಾ ಹರಸಲಿ ಜುವೆಲ್ಲರ್ಸ್‌ನ ಮಾಲಕರಿಗೂ, ಕುಟುಂಬಸ್ಥರಿಗೂ ಹಾಗೂ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೂ ಭಗವಂತನು ಆಯುರಾರೋಗ್ಯವನ್ನು ನೀಡಲಿ ಹಾಗೂ ಮಾಡುವ ಕೆಲಸಗಳಲ್ಲಿ ಅವರು ಉತ್ತಮ ಫಲ ಕಾಣುವಂತಾಗಲಿ ಎಂದು ಆಶಿಸಿದರು. ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿರುವ ಇಂತಹ ಸಂಸ್ಥೆಗಳು ನಮ್ಮೊಂದಿಗೆ ಇರುವುದರಿಂದ ನಮಗೆ ಇನ್ನೂ ಮುಂದುವರೆಯಲು ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದು ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!