25.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!