23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya
error: Content is protected !!