July 23, 2026
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ.


ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು ಈ ಬಗ್ಗೆ ಸ್ಥಳಿಯ ವೈದ್ಯರಿಂದ ಔಷದೋಪಚಾರ ಮಾಡಿದರೂ ಕೂಡಾ ಜ್ವರ ಕಡಿಮೆಯಾಗದೇ ಇದ್ದುದರಿಂದ ನ.೧೨ ರಂದು ಮಧ್ಯಾಹ್ನ ಬಂಟ್ವಾಳ ಆಸ್ಪತ್ರೆಗೆ ಹೋಗಿ ಜೌಷಧಿ ತಂದಿದ್ದರು. ಸಂಜೆ ಸಹೋದರ ಮಿಥುನ್ ತನ್ನ ದೊಡ್ಡಪ್ಪನ ಮಕ್ಕಳಾದ ವಿವೇಕ್ ಹಾಗೂ ಅಶೋಕ್ ಕುಮಾರ್ ರವರೊಂದಿಗೆ ಮನೆ ಸಮೀಪವಿರುವ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದಲ್ಲಿಗೆ ಬಂದ ಚೇತನ್ ನಾನು ಬಂಟ್ವಾಳ ಆಸ್ಪತ್ರೆಯಿಂದ ಔಷಧಿ ತೆಗೆದುಕೊಂಡು ಬಂದಿದ್ದೇನೆ. ನನಗೆ ತುಂಬಾ ಸುಸ್ತು ಅಗುತ್ತಿದೆ ಎಂದು ಹೇಳುತ್ತಾ, ಒಮ್ಮೆಲೆ ವಾಂತಿ ಮಾಡಲು ಪ್ರಾರಂಭಿಸಿದ್ದು, ಕೂಡಲೇ ಅವರ ಸಹೋದರ ಮಿಥುನ್ ಹಾಗೂ ದೊಡ್ಡಪ್ಪನ ಮಕ್ಕಳು ಉಪಚರಿಸಿ ಚಿಕಿತ್ಸೆ ಬಗ್ಗೆ ಮಡಂತ್ಯಾರಿಗೆ ಕರೆ ತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಚೇತನ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!