24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya
error: Content is protected !!