July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!