23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
error: Content is protected !!