September 6, 2026
Uncategorized

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ ನ.೧೩ರಂದು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮತ್ತು ವಾಸ್ತು ತಜ್ಞರಾದ ಪಿ.ಜಿ. ಜಗನ್ನಿವಾಸ ರಾವ್ ಪುತ್ತೂರು ಇವರ ನೇತೃತ್ವದಲ್ಲಿ ದೇವರಗುಡ್ಡೆ ಭಟ್ರಬೈಲು ತೆಕ್ಕಾರುನಲ್ಲಿ ನಡೆಯಿತು.


ಬೆಳಿಗ್ಗೆ ಗೋಪಾಲಕೃಷ್ಣ ದೇವರ ವಿಶೇಷ ಪೂಜೆ, ಪ್ರಾರ್ಥನೆ, ಪುಣ್ಯಾಹ, ಮುಷ್ಟಿ ಆದಿ ಶುದ್ಧಿ, ಆಧಾರ ಶಿಲೆ ಪ್ರತಿಷ್ಠೆ, ನಿಧಿಕುಂಭ, ಪದ್ಮ ಕೂರ್ಮ ಹಾಗೂ ಯೋಗನಾಳ ಪ್ರತಿಷ್ಠಾ ಕ್ರಿಯೆಗಳು, ದಕ್ಷಿಣ ಭಾಗದಲ್ಲಿ ಗಣಪತಿ, ದಕ್ಷಿಣಮೂರ್ತಿ ಸಂಕಲ್ಪ ಪ್ರತಿಷ್ಠೆ, ರಾತ್ರಿ ವಾಸ್ತು ಬಲಿ, ಗರ್ಭಪಾತ್ರೆ ಸಂಸ್ಕಾರ ಹೋಮ, ಕಲಶಪೂರಣ, ಗರ್ಭನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಸಂಸದ ಕಿಶೋರ್ ಕುಮಾರ್ ಪುತ್ತೂರು, ಟ್ರಸ್ಟ್‌ನ ಅಧ್ಯಕ್ಷ ನಾಗಭೂಷಣ್ ರಾವ್, ಸಂಚಾಲಕ ಉದ್ಯಮಿ ಲಕ್ಷ್ಮಣ ಭಟ್ರಬೈಲು, ತಾ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ಬಾರ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರವೀಣ್ ರೈ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸದಸ್ಯರು, ಗೋಪಾಲಕೃಷ್ಣ ಸೇವಾ ಟ್ರಸ್ಟಿಗಳು, ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya
error: Content is protected !!