23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

ಕನ್ಯಾಡಿ: ರಾಷ್ಟ್ರ ಪ್ರಶಸ್ತಿ-2022 ಪುರಸ್ಕೃತ ಸಂಸ್ಥೆ ಸೇವಾಭಾರತಿ ಕನ್ಯಾಡಿ ಇದರ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ನ.14ರಂದು ಕನ್ಯಾಡಿ ಸೇವಾನಿಕೇತನದಲ್ಲಿ ನಡೆಯಿತು.

ಬೆಂಗಳೂರು ರಾ.ಸ್ವ. ಸಂಘ ದಕ್ಷಿಣ ಮಧ್ಯಕ್ಷೇತ್ರಿಯ ಕಾರ್ಯವಾಹರಾದ ತಿಪ್ಪೇಸ್ವಾಮಿ ಯವರು ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಸೇವಾಭಾರತಿ ಕನ್ಯಾಡಿ ಇದರ ಖಜಾಂಜಿ ಕೆ. ವಿನಾಯಕ ರಾವ್ ಪ್ರಸ್ತಾವಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅರ್ಜುನ್ ಭಂಡಾರ್ಕಾರ್ ರವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಇಂಜಿನಿಯರ್ ಸಂಪತ್ ರತ್ನ ಎಸ್. ರಾವ್, ಬಿ. ಭುಜಬಲಿ ಧರ್ಮಸ್ಥಳ, ವಿಜಯ ಕೊಡವೂರು, ಬೆಳ್ತಂಗಡಿ ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳ0ತಿಲ, ಬೆಂಗಳೂರು COMSCORE ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಹಿರಿಯ ವ್ಯವಸ್ಥಾಪಕ ನವೀನ್ ವಜ್ರವೇಲು, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಕೃಷ್ಣ ಭಟ್ ಕೊಕ್ಕಡ, ಶ್ರೀಧರ್ ಕೆ.ವಿ., ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಶಾಂತಾ ಪಿ. ಶೆಟ್ಟಿ, ಶ್ರೀಮತಿ ವತ್ಸಲ ಪಿ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೇವಾಭಾರತಿ ಸೇವಾಧಾಮದ ಸಂಚಾಲಕ ಕೆ. ಪುರಂದರ ರಾವ್, ಉಪಾಧ್ಯಕ್ಷ ಗಿರೀಶ್ ರಾವ್ ಕೆ.ಯು., ಕಾರ್ಯದರ್ಶಿ ಬಾಲಕೃಷ್ಣ ನೈಮಿಷ, ಟ್ರಸ್ಟಿಗಳಾದ ಬಿ. ಕೃಷ್ಣಪ್ಪ ಗುಡಿಗಾರ್, ವಿಷ್ಣುಪ್ರಸಾದ್ ತೆಂಕಿಲ್ಲಾಯ ಹಾಗೂ ಸಲಹಾ ಮಂಡಳಿ ಸದಸ್ಯರು, ಪೋಷಕರು, ಸಿಬ್ಬಂದಿಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು.

ಸೇವಾಭಾರತಿ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಮಾ. ಸಂಕೇತ್ ಪ್ರಾರ್ಥಿಸಿದರು. ಕಾರ್ಯಕ್ರಮ ವ್ಯವಸ್ಥಾಪಕ ಚರಣ್ ಕುಮಾರ್ ಎಂ. ನಿರೂಪಿಸಿ, ಕು. ಸುಮಾ ವಂದಿಸಿದರು.

Related posts

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!