September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಕರಾಯ: ಡಾಕ್ಯೂಮೆಂಟ್ ರೈಟರ್‌ಗೆ ಜೀವ ಬೆದರಿಕೆ : ಪ್ರಕರಣ ದಾಖಲು

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya
error: Content is protected !!