25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಕುವೆಟ್ಟು: ಕುವೆಟ್ಟು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಶಾಲಾ ಎಸ್ ಡಿ ಎo ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಮಕ್ಕಳ ದಿನಾಚರಣೆಯ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯಮಂತ್ರಿ ಶಿವಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್ ಪ್ರಾಸ್ತಾವಿಕವಾಗಿ ಮಾತಾನಾಡಿದರು. ವೇದಿಕೆಯಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸoಘದ ಉಪಾಧ್ಯಕ್ಷ ಉಮೇಶ್ ಕುಮಾರ್, ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಘಟಕ ಅಧ್ಯಕ್ಷ ಇಲ್ಯಾಸ್ ಚಿಲಿoಬಿ, ಕುವೆಟ್ಟು ಗ್ರಾಮ ಪಂ. ಸದಸ್ಯರಾದ ಶಾಲಿನಿ ಪಯ್ಯೋಟ್ಟು. ಆಮೀನ ಮದ್ದಡ್ಕ, ಶಾಲಾ ಎಸ್ ಡಿ ಎo ಸಿ ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಈ ಸoದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಘಟಕದ ವತಿಯಿoದ ಕೊಡುಗೆಯಾಗಿ ನೀಡಿದ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಬಹುಮಾನಗಳು ಹಾಗೂ ಕೆ ಎ ರೋಹಿಣಿ ನಿವೃತ ಶಿಕ್ಷಕರು ಮoಗಳೂರು ಹಾಗೂ. ವ್ಯೆ ಕೆ ಬಜಾರ್ ಮದ್ದಡ್ಕ ಇವರು ನೀಡಿದ ಬಹುಮಾನಗಳನ್ನು ಮಕ್ಕಳ ದಿನಾಚರಣೆಯ ಪ್ರಯಕ್ತ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಾಲಾ ವಿಧ್ಯಾರ್ಥಿಗಳು ಕಾರ್ಯಕ್ರಮನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕ ವೃoದ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya
error: Content is protected !!