22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು.

ತಾಲೂಕಿನ ವಿವಿಧ ಯುವ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಮಾಜದ ಒಗ್ಗಟ್ಟನ್ನು ಕಾಪಾಡುವ ಸಲುವಾಗಿ ರಚನಾತ್ಮಕವಾದ ಕಾರ್ಯಗಳನ್ನು ಮಾಡುವುದು, ಸಮಾಜದ ಸವಾಲುಗಳನ್ನು ಕಾನೂನಾತ್ಮವಾಗಿ ಎದುರಿಸುವುದು, ಕೋಮು ಸೌಹಾರ್ಧತೆ ಬೆಳೆಸುವುದು, ತಪ್ಪು ಸಂದೇಶಗಳ ವಿರುಧ್ಧ ನೈಜ ವಿಷಯಗಳನ್ನು ಸಮಾಜಕ್ಕೆ ತಿಳಿಸುವುದು,ವಿಧ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು, ಮುಂತಾದ ವಿಷಯಗಳನ್ನು ಚರ್ಚಿಸಲಾಯಿತು.

ಈ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಯೂತ್ ಸಿವಿಲ್ ಫಾರಮ್ ಎಂಬ ನೂತನ ಸಮಿತಿಯನ್ನು ರೂಪಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಡ್ವೋಕೇಟ್ ನವಾಝ್ ಶರೀಫ್ ಅರೆಕ್ಕಲ್ ,ಉಪಾಧ್ಯಕ್ಷರಾಗಿ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಹಸನ್ ಮುಬಾರಕ್ ಸಖಾಫಿ ಪುಂಜಾಲಕಟ್ಟೆ,ಮುಹಮ್ಮದ್ ಸ್ವಾಲಿಹ್ ಮದ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಹಕೀಂ ಕೊಕ್ಕಡ,ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಾದಿಖ್ ಬಳಂಜ, ರಿಯಾಝ್ ಫೈಝಿ,ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು,ಕೋಶಾಧಿಕಾರಿಯಾಗಿ ಹಕೀಂ ಬಂಗೇರುಕಟ್ಟೆ,ಸಂಚಾಲಕರಾಗಿ ಸಿರಾಜ್ ಚಿಲಿಂಬಿ, ಕಲಂದರ್ ಕೊಕ್ಕಡ,ಅಝೀಝ್ ಅಶ್ಶಾಫಿ,ಶಫೀ ಉಮರ್ ಬಂಗಾಡಿ ಸಂಯೋಜಕರಾಗಿ ನಝೀರ್ ಅಝ್ಹರಿ ಬೊಳ್ಮಿನಾರ್,ಸದಸ್ಯರಾಗಿ ಶಾರುಕ್ ಉಜಿರೆ,ತುರಾಬ್ ಪಿಲ್ಯ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಗೆ ಅಡ್ವಕೇಟ್ ನವಾಝ್ ಶರೀಫ್ ಸ್ವಾಗತಿಸಿದರು. ರಿಯಾಝ್ ಫೈಝಿ ದುವಾ ನೆರವೇರಿಸಿದರು. ನಝೀರ್ ಅಝ್ಹರಿ ಉಧ್ಘಾಟಿಸಿದರು .

ಹಕೀಂ ಕೊಕ್ಕಡ ವಿಷಯ ಪ್ರಸ್ತಾಪಿಸಿದರು,ಅಬ್ದುಲ್ ಕರೀಂ ಗೇರುಕಟ್ಟೆ ವಂದಿಸಿದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya
error: Content is protected !!