September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು.

ತಾಲೂಕಿನ ವಿವಿಧ ಯುವ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಮಾಜದ ಒಗ್ಗಟ್ಟನ್ನು ಕಾಪಾಡುವ ಸಲುವಾಗಿ ರಚನಾತ್ಮಕವಾದ ಕಾರ್ಯಗಳನ್ನು ಮಾಡುವುದು, ಸಮಾಜದ ಸವಾಲುಗಳನ್ನು ಕಾನೂನಾತ್ಮವಾಗಿ ಎದುರಿಸುವುದು, ಕೋಮು ಸೌಹಾರ್ಧತೆ ಬೆಳೆಸುವುದು, ತಪ್ಪು ಸಂದೇಶಗಳ ವಿರುಧ್ಧ ನೈಜ ವಿಷಯಗಳನ್ನು ಸಮಾಜಕ್ಕೆ ತಿಳಿಸುವುದು,ವಿಧ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು, ಮುಂತಾದ ವಿಷಯಗಳನ್ನು ಚರ್ಚಿಸಲಾಯಿತು.

ಈ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಯೂತ್ ಸಿವಿಲ್ ಫಾರಮ್ ಎಂಬ ನೂತನ ಸಮಿತಿಯನ್ನು ರೂಪಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಡ್ವೋಕೇಟ್ ನವಾಝ್ ಶರೀಫ್ ಅರೆಕ್ಕಲ್ ,ಉಪಾಧ್ಯಕ್ಷರಾಗಿ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಹಸನ್ ಮುಬಾರಕ್ ಸಖಾಫಿ ಪುಂಜಾಲಕಟ್ಟೆ,ಮುಹಮ್ಮದ್ ಸ್ವಾಲಿಹ್ ಮದ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಹಕೀಂ ಕೊಕ್ಕಡ,ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಾದಿಖ್ ಬಳಂಜ, ರಿಯಾಝ್ ಫೈಝಿ,ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು,ಕೋಶಾಧಿಕಾರಿಯಾಗಿ ಹಕೀಂ ಬಂಗೇರುಕಟ್ಟೆ,ಸಂಚಾಲಕರಾಗಿ ಸಿರಾಜ್ ಚಿಲಿಂಬಿ, ಕಲಂದರ್ ಕೊಕ್ಕಡ,ಅಝೀಝ್ ಅಶ್ಶಾಫಿ,ಶಫೀ ಉಮರ್ ಬಂಗಾಡಿ ಸಂಯೋಜಕರಾಗಿ ನಝೀರ್ ಅಝ್ಹರಿ ಬೊಳ್ಮಿನಾರ್,ಸದಸ್ಯರಾಗಿ ಶಾರುಕ್ ಉಜಿರೆ,ತುರಾಬ್ ಪಿಲ್ಯ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಗೆ ಅಡ್ವಕೇಟ್ ನವಾಝ್ ಶರೀಫ್ ಸ್ವಾಗತಿಸಿದರು. ರಿಯಾಝ್ ಫೈಝಿ ದುವಾ ನೆರವೇರಿಸಿದರು. ನಝೀರ್ ಅಝ್ಹರಿ ಉಧ್ಘಾಟಿಸಿದರು .

ಹಕೀಂ ಕೊಕ್ಕಡ ವಿಷಯ ಪ್ರಸ್ತಾಪಿಸಿದರು,ಅಬ್ದುಲ್ ಕರೀಂ ಗೇರುಕಟ್ಟೆ ವಂದಿಸಿದರು.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಜನಪದ ಗೀತಾಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿಗೆ ಸತತ ನಾಲ್ಕನೇ ಬಾರಿ ಪ್ರಥಮ ಸ್ಥಾನ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!