September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 47ನೇ ವರ್ಷದ ಭಜನಾ ಸಪ್ತಾಹದ ಧಾರ್ಮಿಕ ಸಭಾ ಕಾರ್ಯಕ್ರಮ ನ 13ರಂದು ನಡೆಯಿತು.

ಧಾರ್ಮಿಕ ಉಪನ್ಯಾಸಕರಾಗಿ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷ ಬಿ ಸಂಪತ್ ಸುವರ್ಣ ಮಾತನಾಡಿ. ಭಕ್ತಿಯಿಂದ ದೇವರನ್ನು ಬಜಿಸಿದರೆ ಭಗವಂತ ಒಳಿಯಲು ಸಾಧ್ಯ. ಭಗವಂತ ಭಜನೆಗೆ ಮಾತ್ರ ಒಳಿಯಲು ಸಾಧ್ಯ. ಭಾವ ರಾಗ ತಾಳ ಅದೇ ಭಾರತ ಭಾರತ ಎಂದರೆ ದೇವರು ಹಿಂದೂ ಧರ್ಮದ ಪುಣ್ಯದ ಭೂಮಿ ನಮ್ಮದು ಎಂದರು. 47 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ಅನಂತೇಶ್ವರ ಭಜನಾ ಮಂಡಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಮಂಡಳಿಯ ಅಧ್ಯಕ್ಷ ಪುಷ್ಪಕ್ ರಾವ್ ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಯುವರಾಜ್ ಬರಮೇಲು ವಾರ್ಷಿಕ ವರದಿ ಮಂಡಿಸಿದರು. ಬಾಲಕೃಷ್ಣ ಭಟ್ ಸ್ವಾಗತಿಸಿದರು. ಹರ್ಷಬಳ್ಳಮಂಜ ಕಾರ್ಯಕ್ರಮ ನಿರೂಪಿಸಿದರು. ಮಚ್ಚಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರೌಢಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾಸಾಗರ ಸಿ ಬಿ ಯಸ್ ಇ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು

ನ.16 ರ ವರೆಗೆ ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು 48 ಗಂಟೆಗಳ ಅಖಂಡ ಭಜನಾ ಸೇವೆಯೊಂದಿಗೆ ದೇವರಿಗೆ ರಂಗಪೂಜೆ ದೀಪೋತ್ಸವದೊಂದಿಗೆ ನಡೆಯಲಿದೆ.

ವರದಿ: ಹರ್ಷ ಬಳ್ಳಮಂಜ

Related posts

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!