27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!