April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!