22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya
error: Content is protected !!