23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಧಾರ್ಮಿಕ

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

ತೆಕ್ಕಾರು : ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ,ಗಭ೯ನ್ಯಾಸ ಕಾರ್ಯಕ್ರಮ ನ.13 ರಂದು ಪ್ರತಿಷ್ಠಾಧಿಗಳನ್ನು ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ‌ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಲಾಯಿತು.

ಶ್ರೀ ಗೋಪಾಲಕೃಷ್ಣ ದೇವರ ವಿಶೇಷವಾದ ಪೂಜೆ, ಪುಣ್ಯಾಹ , ಮುಷ್ಟಿಆದಿಶುದ್ಧಿ,ಆಧಾರ ಶಿಲೆ ಪ್ರತಿಷ್ಠೆ, ನಿಧಿ ಕುಂಭ,ಪದ್ಮಕೂರ್ಮ ಹಾಗೂಯೋಗನಾಳ ಪ್ರತಿಷ್ಠೆ, ಹಾಗೂ ದಕ್ಷಿಣಾಮೂರ್ತಿ ಸಂಕಲ್ಪ ನಡೆಯಿತು.ಬಳಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಬೊಟ್ಯಾಡಿ ಈ ಒಂದು ದೇವಸ್ಥಾನದ ನಿರ್ಮಾಣ ಕಾರ್ಯದಲ್ಲಿ ವಿಧಾನ ಪರಿಷತ್ ಸದಸ್ಯನಾದ ನಂತರ ಪ್ರಥಮವಾಗಿ ಭಾಗವಹಿಸಲು ಅವಕಾಶ ಸಿಕ್ಕಿರೋದು ನನ್ನ ಪಾಲಿನ ಸುಯೋಗ ಒದಗಿ ಬಂದಿದೆ, ಈ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣವಾಗಿ ಸಹಕರಿಸಿ ಮೂಲಭೂತ ಸೌಕರ್ಯಕ್ಕೆ ಅನುದಾನ ನೀಡಲು ಪ್ರಯತ್ನಿಸುವುದಾಗಿ ತಿಳಿಸಿ ಶಿಲಾಮಯ ದೇಣಿಗೆಯ ಕೂಪನ್ ಗಳನ್ನು ಬಿಡುಗಡೆ ಗೊಳಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದಕ್ಕಾಗಿ ಧನ್ಯವಾದ ಹೇಳಿ ಸಹಕಾರದ ಭರವಸೆ ನೀಡಿದರು.ವಾಸ್ತುತಜ್ಞರಾದ ಜಗನ್ನಿವಾಸ ರಾವ್ , ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ನವೀನ್ ನೆರಿಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ತುಕಾರಾಮ ನಾಯಕ್ ಯನ್.ಟ್ರಸ್ಟ್ ಅಧ್ಯಕ್ಷರಾದ ನಾಗಭೂಷಣ ರಾವ್, ಸಂಚಾಲಕರಾದ ಲಕ್ಷ್ಮಣ್ ಬಟ್ರೆಬೈಲು, ಹಾಗೂ ಟ್ರಸ್ಟಿಗಳು, ಜೀರ್ಣೋದ್ಧಾರ ಸಮಿತಿಯ ಸಂತೋಷ್ ಕೆ,ತುಳಸಿಧರ ಪೂಜಾರಿ,ಶರತ್, ಬಾಲಕೃಷ್ಣ ಕುಲಾಲ್,ನವೀಶ್ ನಾಯ್ಕ, ಹಾಗೂ ಊರ ಹಿರಿಯರಾದ ಶಿವಪ್ಪ ಪೂಜಾರಿ, ಹರಿಣಾಕ್ಷಿ ಟೀಚರ್,ಕೇಶವ ಪೂಜಾರಿ,ಸಾಂತಪ್ಪ ಗೌಡ‌ ಮತ್ತು ತೆಕ್ಕಾರು ,ಬಾರ್ಯ,ಪುತ್ತಿಲ,ಉಳಿಯ ಹಿಂದೂ ಬಾಂಧವರು ಉಪಸ್ಥಿತರಿದ್ದರು.
ಸಂಜೆ ವಾಸ್ತು ಬಲಿ,ಗರ್ಭಪಾತ್ರೆಸಂಸ್ಕಾರಹೋಮ,ಕಲಶ ಪೂರಾಣ,ಗರ್ಭನ್ಯಾಸ ಧಾರ್ಮಿಕ ವಿಧಿವಿಧಾನ ಪ್ರಕ್ರಿಯೆ ಜರಗಿತು.

Related posts

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
error: Content is protected !!