25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು.

ತಾಲೂಕಿನ ವಿವಿಧ ಯುವ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಮಾಜದ ಒಗ್ಗಟ್ಟನ್ನು ಕಾಪಾಡುವ ಸಲುವಾಗಿ ರಚನಾತ್ಮಕವಾದ ಕಾರ್ಯಗಳನ್ನು ಮಾಡುವುದು, ಸಮಾಜದ ಸವಾಲುಗಳನ್ನು ಕಾನೂನಾತ್ಮವಾಗಿ ಎದುರಿಸುವುದು, ಕೋಮು ಸೌಹಾರ್ಧತೆ ಬೆಳೆಸುವುದು, ತಪ್ಪು ಸಂದೇಶಗಳ ವಿರುಧ್ಧ ನೈಜ ವಿಷಯಗಳನ್ನು ಸಮಾಜಕ್ಕೆ ತಿಳಿಸುವುದು,ವಿಧ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು, ಮುಂತಾದ ವಿಷಯಗಳನ್ನು ಚರ್ಚಿಸಲಾಯಿತು.

ಈ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಯೂತ್ ಸಿವಿಲ್ ಫಾರಮ್ ಎಂಬ ನೂತನ ಸಮಿತಿಯನ್ನು ರೂಪಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಡ್ವೋಕೇಟ್ ನವಾಝ್ ಶರೀಫ್ ಅರೆಕ್ಕಲ್ ,ಉಪಾಧ್ಯಕ್ಷರಾಗಿ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಹಸನ್ ಮುಬಾರಕ್ ಸಖಾಫಿ ಪುಂಜಾಲಕಟ್ಟೆ,ಮುಹಮ್ಮದ್ ಸ್ವಾಲಿಹ್ ಮದ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಹಕೀಂ ಕೊಕ್ಕಡ,ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಾದಿಖ್ ಬಳಂಜ, ರಿಯಾಝ್ ಫೈಝಿ,ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು,ಕೋಶಾಧಿಕಾರಿಯಾಗಿ ಹಕೀಂ ಬಂಗೇರುಕಟ್ಟೆ,ಸಂಚಾಲಕರಾಗಿ ಸಿರಾಜ್ ಚಿಲಿಂಬಿ, ಕಲಂದರ್ ಕೊಕ್ಕಡ,ಅಝೀಝ್ ಅಶ್ಶಾಫಿ,ಶಫೀ ಉಮರ್ ಬಂಗಾಡಿ ಸಂಯೋಜಕರಾಗಿ ನಝೀರ್ ಅಝ್ಹರಿ ಬೊಳ್ಮಿನಾರ್,ಸದಸ್ಯರಾಗಿ ಶಾರುಕ್ ಉಜಿರೆ,ತುರಾಬ್ ಪಿಲ್ಯ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಗೆ ಅಡ್ವಕೇಟ್ ನವಾಝ್ ಶರೀಫ್ ಸ್ವಾಗತಿಸಿದರು. ರಿಯಾಝ್ ಫೈಝಿ ದುವಾ ನೆರವೇರಿಸಿದರು. ನಝೀರ್ ಅಝ್ಹರಿ ಉಧ್ಘಾಟಿಸಿದರು .

ಹಕೀಂ ಕೊಕ್ಕಡ ವಿಷಯ ಪ್ರಸ್ತಾಪಿಸಿದರು,ಅಬ್ದುಲ್ ಕರೀಂ ಗೇರುಕಟ್ಟೆ ವಂದಿಸಿದರು.

Related posts

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!