23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು.

ತಾಲೂಕಿನ ವಿವಿಧ ಯುವ ಪ್ರತಿನಿಧಿಗಳು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಮಾಜದ ಒಗ್ಗಟ್ಟನ್ನು ಕಾಪಾಡುವ ಸಲುವಾಗಿ ರಚನಾತ್ಮಕವಾದ ಕಾರ್ಯಗಳನ್ನು ಮಾಡುವುದು, ಸಮಾಜದ ಸವಾಲುಗಳನ್ನು ಕಾನೂನಾತ್ಮವಾಗಿ ಎದುರಿಸುವುದು, ಕೋಮು ಸೌಹಾರ್ಧತೆ ಬೆಳೆಸುವುದು, ತಪ್ಪು ಸಂದೇಶಗಳ ವಿರುಧ್ಧ ನೈಜ ವಿಷಯಗಳನ್ನು ಸಮಾಜಕ್ಕೆ ತಿಳಿಸುವುದು,ವಿಧ್ಯಾರ್ಥಿಗಳಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸುವುದು, ಮುಂತಾದ ವಿಷಯಗಳನ್ನು ಚರ್ಚಿಸಲಾಯಿತು.

ಈ ನಿಟ್ಟಿನಲ್ಲಿ ಸಮಾಲೋಚನೆ ಸಭೆಯು ಯೂತ್ ಸಿವಿಲ್ ಫಾರಮ್ ಎಂಬ ನೂತನ ಸಮಿತಿಯನ್ನು ರೂಪಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಅಡ್ವೋಕೇಟ್ ನವಾಝ್ ಶರೀಫ್ ಅರೆಕ್ಕಲ್ ,ಉಪಾಧ್ಯಕ್ಷರಾಗಿ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಹಸನ್ ಮುಬಾರಕ್ ಸಖಾಫಿ ಪುಂಜಾಲಕಟ್ಟೆ,ಮುಹಮ್ಮದ್ ಸ್ವಾಲಿಹ್ ಮದ್ದಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಹಕೀಂ ಕೊಕ್ಕಡ,ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸಾದಿಖ್ ಬಳಂಜ, ರಿಯಾಝ್ ಫೈಝಿ,ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರು,ಕೋಶಾಧಿಕಾರಿಯಾಗಿ ಹಕೀಂ ಬಂಗೇರುಕಟ್ಟೆ,ಸಂಚಾಲಕರಾಗಿ ಸಿರಾಜ್ ಚಿಲಿಂಬಿ, ಕಲಂದರ್ ಕೊಕ್ಕಡ,ಅಝೀಝ್ ಅಶ್ಶಾಫಿ,ಶಫೀ ಉಮರ್ ಬಂಗಾಡಿ ಸಂಯೋಜಕರಾಗಿ ನಝೀರ್ ಅಝ್ಹರಿ ಬೊಳ್ಮಿನಾರ್,ಸದಸ್ಯರಾಗಿ ಶಾರುಕ್ ಉಜಿರೆ,ತುರಾಬ್ ಪಿಲ್ಯ ಇವರನ್ನು ಆಯ್ಕೆ ಮಾಡಲಾಯಿತು.

ಸಭೆಗೆ ಅಡ್ವಕೇಟ್ ನವಾಝ್ ಶರೀಫ್ ಸ್ವಾಗತಿಸಿದರು. ರಿಯಾಝ್ ಫೈಝಿ ದುವಾ ನೆರವೇರಿಸಿದರು. ನಝೀರ್ ಅಝ್ಹರಿ ಉಧ್ಘಾಟಿಸಿದರು .

ಹಕೀಂ ಕೊಕ್ಕಡ ವಿಷಯ ಪ್ರಸ್ತಾಪಿಸಿದರು,ಅಬ್ದುಲ್ ಕರೀಂ ಗೇರುಕಟ್ಟೆ ವಂದಿಸಿದರು.

Related posts

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!