April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 47ನೇ ವರ್ಷದ ಭಜನಾ ಸಪ್ತಾಹದ ಧಾರ್ಮಿಕ ಸಭಾ ಕಾರ್ಯಕ್ರಮ ನ 13ರಂದು ನಡೆಯಿತು.

ಧಾರ್ಮಿಕ ಉಪನ್ಯಾಸಕರಾಗಿ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷ ಬಿ ಸಂಪತ್ ಸುವರ್ಣ ಮಾತನಾಡಿ. ಭಕ್ತಿಯಿಂದ ದೇವರನ್ನು ಬಜಿಸಿದರೆ ಭಗವಂತ ಒಳಿಯಲು ಸಾಧ್ಯ. ಭಗವಂತ ಭಜನೆಗೆ ಮಾತ್ರ ಒಳಿಯಲು ಸಾಧ್ಯ. ಭಾವ ರಾಗ ತಾಳ ಅದೇ ಭಾರತ ಭಾರತ ಎಂದರೆ ದೇವರು ಹಿಂದೂ ಧರ್ಮದ ಪುಣ್ಯದ ಭೂಮಿ ನಮ್ಮದು ಎಂದರು. 47 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ಅನಂತೇಶ್ವರ ಭಜನಾ ಮಂಡಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಮಂಡಳಿಯ ಅಧ್ಯಕ್ಷ ಪುಷ್ಪಕ್ ರಾವ್ ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಯುವರಾಜ್ ಬರಮೇಲು ವಾರ್ಷಿಕ ವರದಿ ಮಂಡಿಸಿದರು. ಬಾಲಕೃಷ್ಣ ಭಟ್ ಸ್ವಾಗತಿಸಿದರು. ಹರ್ಷಬಳ್ಳಮಂಜ ಕಾರ್ಯಕ್ರಮ ನಿರೂಪಿಸಿದರು. ಮಚ್ಚಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರೌಢಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾಸಾಗರ ಸಿ ಬಿ ಯಸ್ ಇ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು

ನ.16 ರ ವರೆಗೆ ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು 48 ಗಂಟೆಗಳ ಅಖಂಡ ಭಜನಾ ಸೇವೆಯೊಂದಿಗೆ ದೇವರಿಗೆ ರಂಗಪೂಜೆ ದೀಪೋತ್ಸವದೊಂದಿಗೆ ನಡೆಯಲಿದೆ.

ವರದಿ: ಹರ್ಷ ಬಳ್ಳಮಂಜ

Related posts

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya
error: Content is protected !!