23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ನ. 14) ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡಿಗರ ಇತಿಹಾಸ, ಸದ್ಗುಣ ಹಾಗೂ ಕೊಡುಗೆಗಳನ್ನು ಶ್ಲಾಘಿಸಿದರು.


ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸಿ, ಯುವ ಬರಹಗಾರರಾಗಲು, ಸ್ವಭಾಷೆಯನ್ನು ಬೆಳೆಸಿ, ಅನ್ಯ ಭಾಷೆಯನ್ನು ಗೌರವಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ಕಿಂಡರ್ಗಾರ್ಟನ್ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕ ಶ್ರೇಯಾಂಸ್ ಜೈನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ನಿಧಿ ಸ್ವಾಗತಿಸಿ, ಸಂಜನಾ ವಂದಿಸಿ, ಪರಿಣಿತ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ವಿದ್ವತ್ ಪ.ಪೂ. ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!