22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ ಸೇವಕರು ಕಿಲ್ಲೂರು ಪರಿಸರದ ಸ್ವಚ್ಛತೆ ಮಾಡಿದರು.


ಮಿತ್ತಬಾಗಿಲು ಗ್ರಾಮ ಪಂಚಾಯತ್ ಇದರ ಗ್ರಾಮಾಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ರಜಿಯಾ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ,
ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ರಾ. ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya
error: Content is protected !!