23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಪ್ರಯುಕ್ತ ಸ್ವಚ್ಛ ಭಾರತ – ಸ್ವಚ್ಛ ಕಿಲ್ಲೂರು ಅಭಿಯಾನ ಅಂಗವಾಗಿ ವಿದ್ಯಾರ್ಥಿ ಸ್ವಯಂ ಸೇವಕರು ಕಿಲ್ಲೂರು ಪರಿಸರದ ಸ್ವಚ್ಛತೆ ಮಾಡಿದರು.


ಮಿತ್ತಬಾಗಿಲು ಗ್ರಾಮ ಪಂಚಾಯತ್ ಇದರ ಗ್ರಾಮಾಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಅವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಹೆಚ್.ಕೆ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯೆ ರಜಿಯಾ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ,
ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ರಾ. ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಆದಿತ್ಯ ವಿ ಹಾಗೂ ಪ್ರಾಪ್ತಿ ಗೌಡ ಮತ್ತು ವಿದ್ಯಾರ್ಥಿ ಸ್ವಯಂ ಸೇವಕರು ಉಪಸ್ಥಿತರಿದ್ದರು.

Related posts

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!