23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!