25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!