September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.


ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರಾಗಿದ್ದು, ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದಾರೆ.

ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.
ನ.13ರಂದು ದಿಢೀರ್ ಆಗಮಿಸಿದ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ. ಈಗ ಸೂರು ಕಳೆದುಕೊಂಡಿರುವ ವೃದ್ಧ ದಂಪತಿ ನಮಗೆ ಈ ಸರ್ಕಾರಿ ಜಾಗದಲ್ಲಿ ನಾವು ನಿರ್ಮಿಸಿರುವ ಸಣ್ಣ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ ಇಲ್ಲವೇ ಇಲ್ಲಿಯೇ ಪ್ರಾಣಬಿಡುತ್ತೇವೆ ಎಂದಿದ್ದಾರೆ.

Related posts

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!