ಕುವೆಟ್ಟು: ಕುವೆಟ್ಟು ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಶಾಲಾ ಎಸ್ ಡಿ ಎo ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಮಕ್ಕಳ ದಿನಾಚರಣೆಯ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯಮಂತ್ರಿ ಶಿವಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್ ಪ್ರಾಸ್ತಾವಿಕವಾಗಿ ಮಾತಾನಾಡಿದರು. ವೇದಿಕೆಯಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸoಘದ ಉಪಾಧ್ಯಕ್ಷ ಉಮೇಶ್ ಕುಮಾರ್, ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಘಟಕ ಅಧ್ಯಕ್ಷ ಇಲ್ಯಾಸ್ ಚಿಲಿoಬಿ, ಕುವೆಟ್ಟು ಗ್ರಾಮ ಪಂ. ಸದಸ್ಯರಾದ ಶಾಲಿನಿ ಪಯ್ಯೋಟ್ಟು. ಆಮೀನ ಮದ್ದಡ್ಕ, ಶಾಲಾ ಎಸ್ ಡಿ ಎo ಸಿ ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.


ಈ ಸoದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಘಟಕದ ವತಿಯಿoದ ಕೊಡುಗೆಯಾಗಿ ನೀಡಿದ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಬಹುಮಾನಗಳು ಹಾಗೂ ಕೆ ಎ ರೋಹಿಣಿ ನಿವೃತ ಶಿಕ್ಷಕರು ಮoಗಳೂರು ಹಾಗೂ. ವ್ಯೆ ಕೆ ಬಜಾರ್ ಮದ್ದಡ್ಕ ಇವರು ನೀಡಿದ ಬಹುಮಾನಗಳನ್ನು ಮಕ್ಕಳ ದಿನಾಚರಣೆಯ ಪ್ರಯಕ್ತ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಾಲಾ ವಿಧ್ಯಾರ್ಥಿಗಳು ಕಾರ್ಯಕ್ರಮನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕ ವೃoದ ಮಕ್ಕಳ ಪೋಷಕರು ಉಪಸ್ಥಿತರಿದ್ದರು.











