September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 47ನೇ ವರ್ಷದ ಭಜನಾ ಸಪ್ತಾಹದ ಧಾರ್ಮಿಕ ಸಭಾ ಕಾರ್ಯಕ್ರಮ ನ 13ರಂದು ನಡೆಯಿತು.

ಧಾರ್ಮಿಕ ಉಪನ್ಯಾಸಕರಾಗಿ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷ ಬಿ ಸಂಪತ್ ಸುವರ್ಣ ಮಾತನಾಡಿ. ಭಕ್ತಿಯಿಂದ ದೇವರನ್ನು ಬಜಿಸಿದರೆ ಭಗವಂತ ಒಳಿಯಲು ಸಾಧ್ಯ. ಭಗವಂತ ಭಜನೆಗೆ ಮಾತ್ರ ಒಳಿಯಲು ಸಾಧ್ಯ. ಭಾವ ರಾಗ ತಾಳ ಅದೇ ಭಾರತ ಭಾರತ ಎಂದರೆ ದೇವರು ಹಿಂದೂ ಧರ್ಮದ ಪುಣ್ಯದ ಭೂಮಿ ನಮ್ಮದು ಎಂದರು. 47 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ಅನಂತೇಶ್ವರ ಭಜನಾ ಮಂಡಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಮಂಡಳಿಯ ಅಧ್ಯಕ್ಷ ಪುಷ್ಪಕ್ ರಾವ್ ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕಾರ್ಯದರ್ಶಿ ಯುವರಾಜ್ ಬರಮೇಲು ವಾರ್ಷಿಕ ವರದಿ ಮಂಡಿಸಿದರು. ಬಾಲಕೃಷ್ಣ ಭಟ್ ಸ್ವಾಗತಿಸಿದರು. ಹರ್ಷಬಳ್ಳಮಂಜ ಕಾರ್ಯಕ್ರಮ ನಿರೂಪಿಸಿದರು. ಮಚ್ಚಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಪ್ರೌಢಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾಸಾಗರ ಸಿ ಬಿ ಯಸ್ ಇ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು

ನ.16 ರ ವರೆಗೆ ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು 48 ಗಂಟೆಗಳ ಅಖಂಡ ಭಜನಾ ಸೇವೆಯೊಂದಿಗೆ ದೇವರಿಗೆ ರಂಗಪೂಜೆ ದೀಪೋತ್ಸವದೊಂದಿಗೆ ನಡೆಯಲಿದೆ.

ವರದಿ: ಹರ್ಷ ಬಳ್ಳಮಂಜ

Related posts

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆ ಟೌನ್‌ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸಾದಲ್ಲಿ ಹಮ್ರಾ ವರ್’ದ ಬಾಲ ಮಾಸಿಕ ಚಂದಾ ಅಭಿಯಾನಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!