September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ನ. 14) ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಯುವರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡಿಗರ ಇತಿಹಾಸ, ಸದ್ಗುಣ ಹಾಗೂ ಕೊಡುಗೆಗಳನ್ನು ಶ್ಲಾಘಿಸಿದರು.


ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸಿ, ಯುವ ಬರಹಗಾರರಾಗಲು, ಸ್ವಭಾಷೆಯನ್ನು ಬೆಳೆಸಿ, ಅನ್ಯ ಭಾಷೆಯನ್ನು ಗೌರವಿಸಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯೋತ್ಸವ ಆಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಶಾಲೆಯ ಕಿಂಡರ್ಗಾರ್ಟನ್ ಮುಖ್ಯಸ್ಥೆ ಜೆಸಿಂತಾ ರೋಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕ ಶ್ರೇಯಾಂಸ್ ಜೈನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿಯರಾದ ನಿಧಿ ಸ್ವಾಗತಿಸಿ, ಸಂಜನಾ ವಂದಿಸಿ, ಪರಿಣಿತ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!